5 APRIL 2024

“ಬಿಜೆಪಿಯ ಭದ್ರಕೋಟೆ ಮುಗದದಲ್ಲಿ ಮತ್ತೊಮ್ಮೆ ಅರಳಲಿದೆ ಕಮಲ”

ಕಲಘಟಗಿ ಮತಕ್ಷೇತ್ರದ ಮುಗದ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು.

ಪ್ರಧಾನಮಂತ್ರಿ ಶ್ರೀ Narendra Modi ಅವರು ಭಾರತದ ಚುಕ್ಕಾಣಿ ಹಿಡಿದ ನಂತರದಲ್ಲಿ ದೇಶದಲ್ಲಾದ ಬದಲಾವಣೆ ಮತ್ತು ಅವರ ನೇತೃತ್ವದಲ್ಲಿ ನಮ್ಮ ಜಿಲ್ಲೆಯಲ್ಲಾದ ಅಭಿವೃದ್ಧಿ ಕೆಲಸಗಳನ್ನು ಅರ್ಥೈಸಿಕೊಂಡಿರುವ ಜನತೆ, ದೇಶದ ಹಿತಕ್ಕಾಗಿ ಮತ್ತು ಜನರ ಕಲ್ಯಾಣಕ್ಕಾಗಿ ಬಿಜೆಪಿಯೇ ಮತ್ತೊಮ್ಮೆ ಗೆಲ್ಲಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಇಂದು ಸಮಾವೇಶದಲ್ಲಿ ನೆರೆದಿದ್ದ ಕಾರ್ಯಕರ್ತರ ಮತ್ತು ಜನತೆಯ “ಮೋದಿ ಮತ್ತೊಮ್ಮೆ” ಎಂಬ‌ ಹರ್ಷೋದ್ಘಾರದ ಘೋಷವಾಕ್ಯ, ಮೋದಿಯವರು ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿಯುವುದನ್ನು ಖಚಿತಪಡಿಸಿದಂತಿತ್ತು.

ಸಮಾವೇಶದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ Nagaraj Chebbi , ಮಂಡಲ ಅಧ್ಯಕ್ಷರಾದ ಶ್ರೀ ಕಲ್ಮೇಶ ಬೇಲೂರು ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: