Tel: +91 0836 2251055
2 APRIL 2024
“ವಿಶ್ವಗುರು ಭಾರತ ನಿರ್ಮಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ”
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಡಸ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು.
ಕಳೆದ ಹತ್ತು ವರ್ಷದಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ದೇಶದಲ್ಲಿ ಪರಿವರ್ತನೆಯ ಹೊಸ ಶಕೆ ಆರಂಭವಾಗಿದ್ದು, ಜನರ ಜೀವನಮಟ್ಟದ ಸುಧಾರಣೆಗಾಗಿಯೂ ಸಾಕಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜನತೆಯ ಆಶಯ ಈಡೇರಿಸಿದ್ದೇವೆ. ಸಭೆಯಲ್ಲಿ ಸೇರಿದ್ದ ಸಾರ್ವಜನಿಕರೆಲ್ಲರೂ “ಮತ್ತೊಮ್ಮೆ ಮೋದಿ ಸರಕಾರ” ಎಂಬ ಘೋಷಣೆಯೊಂದಿಗೆ ಪಕ್ಷಕ್ಕೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ಶಿವಾನಂದ ಮ್ಯಾಗೇರಿ, ಪಕ್ಷದ ಪ್ರಮುಖರಾದ ಶ್ರೀ ಶ್ರೀಕಾಂತ ದುಂಡಿಗೌಡ್ರು, ಶ್ರೀ ತಿಪ್ಪಣ್ಣ ಸಾತಣ್ಣವರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.