18 March 2024

“ಈ ಬಾರಿ‌ 400 ಮೀರಿ”

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಹಿಂದೆಂದೂ ಕಂಡಿರದ ಐತಿಹಾಸಿಕ ಗೆಲುವು ಭಾರತೀಯ ಜನತಾ ಪಕ್ಷದ್ದಾಗಬೇಕೆನ್ನುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾದ್ಯಂತ ಈಗಾಗಲೇ ಪಕ್ಷದ ಕಾರ್ಯಕರ್ತರು ಸಜ್ಜಾಗಿದ್ದು, ಇಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಸಭೆ ನಡೆಸಿ, ಚುನಾವಣಾ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ನೂರಾರು ಕಾರ್ಯಕರ್ತರು ಸೇರಿದ್ದು, ಎಲ್ಲಾ ಕಾರ್ಯಕರ್ತರ ಉತ್ಸಾಹ ಮತ್ತು ಸಂಕಲ್ಪ ಮೋದಿಯವರ ನೇತೃತ್ವದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುವುದು ಒಂದೇ ಆಗಿದೆ. ದೇಶದ ಹಿತ ರಕ್ಷಣೆಗೆ ಬಿಜೆಪಿಯೊಂದೇ ಪರಿಹಾರ, ಇದಕ್ಕಾಗಿ ಸಂಪೂರ್ಣವಾಗಿ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಭರವಸೆ ನೀಡಿದರು.

ಸಭೆಯಲ್ಲಿ ಶಾಸಕರಾದ ಶ್ರೀ Mahesh Tenginkai , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಮಾಜಿ ಶಾಸಕರಾದ ಶ್ರೀ ಅಶೋಕ‌ ಕಾಟವೆ, ಪಕ್ಷದ ಪ್ರಮುಖರಾದ ಶ್ರೀ ಡಾ.ಕ್ರಾಂತಿಕಿರಣ್ ಹಾಗೂ ಪಾಲಿಕೆಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

#DharwadMPConstituency

#PhirEkBaarModiSarkar

#BJPForIndia

Tags: